ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಜೆ ಮಳೆರಾಯ ಕಾಣಿಸಿಕೊಂಡಿದ್ದಾನೆ. ಸತತ ಅರ್ಧ ಗಂಟೆಯಿಂದ ಮಳೆರಾಯ ಕಾಣಿಸಿಕೊಂಡಿದ್ದು, ನಗರದಲ್ಲಿ ವರುಣನ ಆರ್ಭಟ ಮತ್ತೆ ಶುರುವಾಗಿದೆ.
ಕಳೆದ ಎರಡು ದಿನಗಳ ಹಿಂದೆ ಮಳೆ ಬಂದು, ಸಿಟಿಯಲ್ಲಿ ಸಾಕಷ್ಟು ಅನಾಹುತ ಸೃಷ್ಟಿಯಾಗಿತ್ತು. ನಗರದ ಹಲವು ಕಡೆ ಮರಗಿಡಗಳು ಉರುಳಿ ಬಿದ್ದಿದ್ವು. ಇದೀಗ ಮತ್ತೆ ಮಳೆಯಾಗ್ತಿದೆ. ಮಲ್ಲೇಶ್ವರಂ, ರಾಜಾಜಿನಗರ, ಶಿವಾನಂದ ಸರ್ಕಲ್, ಮೆಜೆಸ್ಟಿಕ್, ಗಾಂಧಿನಗರ ಸೇರಿದಂತೆ ಬಹುತೇಕ ಕಡೆ ಮಳೆ ಕಾಣಿಸಿಕೊಂಡಿದೆ.