ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ತುಂಬಾ ಕಳೆದ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರು, ವಿಜಯಪುರ, ಕಲಬುರಗಿ, ರಾಯಚೂರು ಸೇರಿದಂತೆ ಅನೇಕ ಕಡೆ ಅಕಾಲಿಕ ಮಳೆಯಾಗಿದೆ.
ಕುಲಬುರಗಿ ಹಾಗೂ ರಾಯಚೂರಿನಲ್ಲಿ ಆಣೆಕಲ್ಲು ಮಳೆಯಾಗಿದೆ. ಇದರಿಂದಾಗಿ ಜನರು ಸಾಕಷ್ಟು ಸಮಸ್ಯೆಯಾಗಿದೆ. ಅಕಾಲಿಕ ಮಳೆ ಸೃಷ್ಟಿಸಿದ ಅವಾಂತರಕ್ಕೆ ಅನೇಕ ಕಡೆ ಬೆಳೆಗಳು ಹಾನಿಯಾಗಿವೆ. ಇನ್ನು ಮಲೆನಾಡಿನ ಭಾಗದಲ್ಲಿಯೂ ಮಳೆ ಕಾಣಿಸಿಕೊಂಡಿದೆ. ಇಂದು ಸಹ ಮಳೆಯೂ ಮುಂದುವರೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.