ಶಿವಮೊಗ್ಗ: ನಗರದಲ್ಲಿ ಇಂದು ಸಂಜೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ಅಬ್ಬರದ ಮಳೆಯಿಂದಾಗಿ ನಗರದ ಬಹುತೇಕ ಕಡೆ ಜಲಾವೃತ ಪರಿಸ್ಥಿತಿ ನಿರ್ಮಾಣವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಹೈರಾಣಾಗಿದ್ದಾರೆ.
ಶಿವಮೊಗ್ಗ ಗ್ಯಾಸ್ ಏಜೆನ್ಸಿ ಬಳಿ ರಾಜಕಾಲುವೆ ತುಂಬಿ ಹರಿದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ವೀರಣ್ಣ ಲೇಔಟ್ 4ನೇ ರಸ್ತೆಯಲ್ಲಿ ತೆಂಗಿನ ಮರ ಬಿದ್ದು 4 ಬೈಕ್ ಗಳು ಜಖಂ ಆಗಿವೆ. ಕೆಲವಡೆ ವಿದ್ಯುತ್ ಕಂಬ ಮುರಿದು ಬಿದ್ದಿವೆ.