ಆ.8ರ ತನಕ ರಾಜ್ಯದಲ್ಲಿ ಮಳೆ

249

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು, ಮಂಡ್ಯ, ಬೆಂಗಳೂರು, ಧಾರವಾಡ, ಗದಗ, ವಿಜಯಪುರ ಸೇರಿದಂತೆ ಎಲ್ಲೆಡೆ ಸತತವಾಗಿ ಮಳೆ ಕಾಣಿಸಿಕೊಳ್ಳುತ್ತಿದೆ. ಇದೆ ರೀತಿ ಆಗಸ್ಟ್ 8ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಉತ್ತಮ ರೀತಿಯಲ್ಲಿ ಕಾಣಿಸಿಕೊಂಡಿದೆ. ಮತ್ತೆ ಕೆಲವು ಕಡೆ ವ್ಯಾಪಕ ಮಳೆಯಾಗಿ ನೆರೆ ಸೃಷ್ಟಿಯಾಗಿದೆ. ಬೆಂಗಳೂರು, ಮಂಡ್ಯ, ವಿಜಯಪುರ ಭಾಗದಲ್ಲಿಯೂ ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ಹಾನಿಯಾಗಿದೆ. ಜೀವ ಹಾನಿಯಾಗಿವೆ.

ಮಳೆ ಇನ್ನು ಮುಂದುವರೆಯುವುದರಿಂದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಜನರು ಹೊರಗೆ ಹೋಗುವಾಗ, ತುಂಬಾ ಹಳೆಯ ಕಾಲದ ಮನೆಯಲ್ಲಿ ಇರುವಾಗ ಸ್ವಲ್ಪ ಎಚ್ಚರಿಕೆಯಿಂದ ಇರುವುದು ಸೂಕ್ತವಾಗಿದೆ.




Leave a Reply

Your email address will not be published. Required fields are marked *

error: Content is protected !!