ಪ್ರಜಾಸ್ತ್ರ ಸುದ್ದಿ
ನವದೆಹಲಿ: ರಾಜೀವ್ ಗಾಂಧಿ ಹತ್ಯೆಯ ಅಪರಾಧಿಗೆ ಸುಪ್ರೀಂ ಕೋರ್ಟ್ ಬುಧುವಾರ ಜಾಮೀನು ಮಂಜೂರು ಮಾಡಿದೆ. ಎ.ಜಿ ಪೆರಾರಿವಾಲನ್ ಗೆ ಷರತ್ತು ಬದ್ಧ ಜಾಮೀನು ನೀಡಲಾಗಿದೆ.
ಪೆರಾರಿವಾಲನ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಕಳೆದ 30 ವರ್ಷಗಳಿಂದ ಜೈಲುವಾಸದಲ್ಲಿದ್ದಾರೆ. ಜೀವಾವಧಿ ಶಿಕ್ಷೆಯನ್ನು ಹಿಂಪಡೆಯುವ ಸಂಬಂಧ ಸಲ್ಲಿಸಿರುವ ಅರ್ಜಿ ರಾಷ್ಟ್ರಪತಿಗಳ ಮುಂದೆ ಇದೆ.