ಪ್ರಜಾಸ್ತ್ರ ಕ್ರೀಡಾ
ಇಂಡಿಯನ್ ಕ್ರಿಕೆಟ್ ಟೀಂನ ಅನುಭವಿ ಆಫ್ ಸ್ಪೀನ್ನರ್ ರವಿಚಂದ್ರನ್ ಅಶ್ವಿನ್ ಹಾಗೂ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಮಿಥಾಲಿ ರಾಜ್ ಅವರ ಹೆಸರನ್ನ, ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲು ಬಿಸಿಸಿಐ ನಿರ್ಧರಿಸಿದೆಯಂತೆ.
ಇನ್ನು ಶಿಖರ್ ಧವನ್, ಕೆ.ಎಲ್ ರಾಹುಲ್, ಫಾಸ್ಟ್ ಬೌಲರ್ ಜಸ್ ಪ್ರೀತ್ ಬೂಮ್ರಾ ಹೆಸರನ್ನ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲು ಮುಂದಾಗಿದೆ. ಮಹಿಳಾ ತಂಡದಿಂದ ಯಾರ ಹೆಸರನ್ನ ಶಿಫಾರಸು ಮಾಡುತ್ತಿಲ್ಲ.
ಏಕದಿನ ಕ್ರಿಕೆಟ್ ಪಂದ್ಯದಲ್ಲಿ 7 ಸಾವಿರಕ್ಕೂ ಹೆಚ್ಚು ರನ್ ಗಳಿಸಿರುವ ಮಿಥಾಲಿ ರಾಜ್, ಮಹಿಳಾ ಸಚಿನ್ ಎಂದೇ ಖ್ಯಾತಿಗಳಿಸಿದ್ದಾರೆ. 38 ವರ್ಷದ ಆಟಗಾರ್ತಿ 2003ರಲ್ಲಿ ಅರ್ಜುನ ಪ್ರಶಸ್ತಿ, 2015ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.