ರಾಜ್ಯಸಭೆ ಚುನಾವಣೆ: ಬಿಜೆಪಿ 20, ಕಾಂಗ್ರೆಸ್ 11 ಸ್ಥಾನ

181

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಜ್ಯಸಭೆಯ 55 ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. 15 ರಾಜ್ಯಗಳ ವಿಧಾನಸಭೆಯಲ್ಲಿನ ಪಕ್ಷಗಳ ಬಲಾಬಲ ನೋಡಿ ಹೇಳುವುದಾದರೆ, ಬಿಜೆಪಿ 20, ಕಾಂಗ್ರೆಸ್ 11 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ.

ಇನ್ನುಳಿದಂತೆ ಎಸ್ಪಿ ಸೇರಿ ಇತರೆ ಪಕ್ಷಗಳ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ನಿರ್ಮಲಾ ಸೀತಾರಾಮನ್, ಜೈರಾಮ್ ರಮೇಶ್ ಮರು ಆಯ್ಕೆ ಆಗುವ ಸಾಧ್ಯತೆಯಿದೆ. ಪಿ.ಚಿದಂಬರಂ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಅಜಯ್ ಮಾಕನ್, ರಣದೀಪ್ ಸುರ್ಜೆವಾಲ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಕಾಂಗ್ರೆಸ್ ತೊರೆದ ಎಸ್ಪಿ ಸೇರಿರುವ ಕಪಿಲ್ ಸಿಬಲ್ ಸ್ಪರ್ಧಿಸಿದ್ದಾರೆ. ಬಂಡಾಯದ ತಂಡದಲ್ಲಿರುವ ಗುಲಾಂ ನಬಿ ಆಜಾದ್, ಆನಂದ್ ಶರ್ಮಾ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಹೀಗಾಗಿ ಯಾರು ಯಾವ ರಾಜ್ಯದಿಂದ ಸ್ಪರ್ಧಿಸುತ್ತಾರೆ ಅನ್ನೋದು ಸಧ್ಯದ ಕುತೂಹಲ.




Leave a Reply

Your email address will not be published. Required fields are marked *

error: Content is protected !!