ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ತನ್ನ 2ನೇ ಅಭ್ಯರ್ಥಿಯನ್ನ ಘೋಷಿಸಿದ್ದು, ಜೊತೆಗೆ ಬಿ ಫಾರ್ಮ್ ಸಹ ನೀಡಿದೆ. ಮೊದಲ ಅಭ್ಯರ್ಥಿಯಾಗಿ ಜೈರಾಮ್ ರಮೇಶಗೆ ಟಿಕೆಟ್ ನೀಡಿದ ಬೆನ್ನಲ್ಲೇ ಮನ್ಸೂರ್ ಆಲಿ ಖಾನ್ ಗೆ ಟಿಕೆಟ್ ನೀಡಿದೆ.
ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿಯನ್ನು ಕಣಕ್ಕೆ ಇಳಿಸುವ ಹೊತ್ತಿನಲ್ಲೇ ಕಾಂಗ್ರೆಸ್ ಹೊಸ ದಾಳಿ ಉರುಳಿಸಿದೆ. ಹೀಗಾಗಿ ಹೆಚ್ಚುವರಿ ಮತಗಳ ಲೆಕ್ಕಾಚಾರದಲ್ಲಿ ಜೆಡಿಎಸ್ ನಡೆಸಿದ್ದ ಪ್ಲಾನ್ ಗೆ ಠಕ್ಕರ್ ನೀಡಲು ಕಾಂಗ್ರೆಸ್ ಮುಂದಾಗಿದೆ.