ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂಬಂಧ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಜಾತ್ಯಾತೀತ ಶಕ್ತಿಗಳು ಒಗ್ಗೂಡಬೇಕು ಅನ್ನೋ ಕಾರಣಕ್ಕೆ ಜೆಡಿಎಸ್ ಶಾಸಕರಿಗೆ ಕಾಂಗ್ರೆಸ್ ಗೆ ಮತ ಹಾಕಲು ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ್ ಕೇಳಿದ್ದಾರೆ. ನನ್ನ ವೈಯಕ್ತಿಕ ಕಾರಣಗಳೇ ಬೇರೆ. ಪಕ್ಷದ ಹಿತಾಸಕ್ತಿಗಳೇ ಬೇರೆ ಎಂದರು.
ಅವರ ಪಕ್ಷದಲ್ಲಿ ಅವರು ಸ್ವತಂತ್ರರು. ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ ಅನ್ನೋ ಕಾರಣಕ್ಕೆ ಮಾತನಾಡಲು ಸಾಧ್ಯವಿಲ್ಲ. ಯಾವುದೇ ಹೇಳಿಕೆ ನೀಡಬೇಕಾದರೂ ಪಕ್ಷದ ನಾಯಕರ ಜೊತೆ ಚರ್ಚಿಸಿಯೇ ಮಾತನಾಡಬೇಕಿದೆ. ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿ ಏನಾಯಿತು ಅನ್ನೋದು ಎಲ್ಲರಿಗೂ ಗೊತ್ತು. ಈಗ ಅದರ ಬಗ್ಗೆ ಮಾತನಾಡುವುದು ಅನಗತ್ಯ ಅಂತಾ ಹೇಳಿದರು.