ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ 2ನೇ ಅಭ್ಯರ್ಥಿ ಗೆಲ್ಲಲ್ಲ

354

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ, ಬಿಜೆಪಿ 2, ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದೊಂದು ಸ್ಥಾನ ಗೆಲ್ಲಲಿವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ 2ನೇ ಅಭ್ಯರ್ಥಿ ಗೆಲ್ಲುವುದಿಲ್ಲವೆಂದು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರೋಗ್ಯ ತಪಾಸಣೆಗಾಗಿ ನಾಲ್ಕು ದಿನ ಸಿಂಗಾಪೂರಗೆ ಹೋಗಿದ್ದೆ. ಶುಕ್ರವಾರ ಬಂದಿದ್ದೇನೆ. ಬಿಜೆಪಿಯಲ್ಲಿ ನಮಗೂ ಆತ್ಮೀಯರಿದ್ದಾರೆ. ಜೆಡಿಎಸ್ ನಲ್ಲಿ 32 ಮತಗಳಿವೆ. ನಾಲ್ಕೈದು ಜನರಿಗೆ ಅಸಮಾಧಾನ ಇರಬಹುದು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದರು.




Leave a Reply

Your email address will not be published. Required fields are marked *

error: Content is protected !!