ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತದಾನ ನಡೆಯುತ್ತಿದೆ. ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಆದರೆ, ಮತ ಹಾಕಿರುವ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣನವರ ಮತ ಅಸಿಂಧುವಾಗುತ್ತೆ ಎಂದು ಹೇಳಲಾಗುತ್ತಿದೆ.
ಮತದಾನದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮತವನ್ನು ತೋರಿಸಿದ್ದಾರೆ ಎಂದು, ಅಭ್ಯರ್ಥಿ ಜೈರಾಮ್ ರಮೇಶ್ ಪೋಲಿಂಗ್ ಏಜೆಂಟ್ ರಾಥೋಡ್ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ ಕಾರಣಕ್ಕೆ ಹೆಚ್.ಡಿ ರೇವಣ್ಣವರ ಮತ ಅಸಿಂಧು ಆಗುವ ಸಾಧ್ಯತೆಯಿದೆ.