ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಾಕಷ್ಟು ಕುತೂಹಲ ಮೂಡಿಸಿರುವ ರಾಜ್ಯಸಭೆ ಚುನಾವಣೆ ಕೊನೆಯ ಹಂತಕ್ಕೆ ಬಂದಿದೆ. ಬಿಜೆಪಿಯಿಂದ 3, ಕಾಂಗ್ರೆಸ್ ನಿಂದ 2, ಜೆಡಿಎಸ್ 1 ಅಭ್ಯರ್ಥಿ ಕಣದಲ್ಲಿದ್ದಾರೆ. ಆದರೆ, ಇಲ್ಲಿ ಬಿಜೆಪಿ 2, ಕಾಂಗ್ರೆಸ್ 1 ಅಭ್ಯರ್ಥಿ ಗೆಲ್ಲುವುದು ಪಕ್ಕಾ. ಹೆಚ್ಚುವರಿ ಅಭ್ಯರ್ಥಿಗಳ ಕಥೆ ಏನು ಅನ್ನೋದು.
ಇನ್ನು ಜೆಡಿಎಸ್ ನಿಂದ ಕಣದಲ್ಲಿರುವ ಕುಪೇಂದ್ರ ರೆಡ್ಡಿ ಗೆಲುವು ಸೋಲು ಇನ್ನೇನು ಕೆಲ ಗಂಟೆಗಳಲ್ಲಿ ಹೊರ ಬೀಳಲಿದೆ. ರಾಜಕೀಯ ಚದುರಂಗದಾಟದಲ್ಲಿ ಯಾವ ಟೈಂನಲ್ಲಿ ಏನಾಗುತ್ತೆ ಅನ್ನೋದು ಗೊತ್ತಾಗದು. ಆದರೆ, ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ರಮೇಶಕುಮಾರಗೆ ಅಭಿನಂದನೆ ಸಲ್ಲಿಸಿರುವುದು ಅಷ್ಟೇ ಕುತೂಹಲ ಮೂಡಿಸಿದೆ.