ರಾಜ್ಯಸಭೆಗೆ ಕರ್ನಾಟಕದ ಕೈ ಅಭ್ಯರ್ಥಿಗಳ ಘೋಷಣೆ

107

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಸಂಬಂಧಸಿದಂತೆ ಕರ್ನಾಟಕದಿಂದ ಮೂವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇಂದು ಟಿಕೆಟ್ ಘೋಷಿಸಿದೆ.

ಜಿ.ಸಿ ಚಂದ್ರಶೇಖರ್, ಡಾ.ಸೈಯದ್ ನಸೀರ್ ಹುಸೇನ್, ಎಐಸಿಸಿ ಖಜಾಂಚಿ ಅಜಯ್ ಮಾಕೆನ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಜಿ.ಸಿ ಚಂದ್ರಶೇಖರ್ ಡಿಸಿಎಂ ಡಿ.ಕೆ ಶಿವಕುಮಾರ್ ಆಪ್ತರು. ನಸೀರ್ ಹುಸೇನ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಪ್ತರು. ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಫೆಬ್ರವರಿ 27ರಂದು ಮತದಾನ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!