ಇಂದಿನ ಕಲಾಪ ಬಲಿ ಪಡೆದ ದೆಹಲಿ ಹಿಂಸಾಚಾರ

290

ನವದೆಹಲಿ: ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಸಂಸತ್ ಕಲಾಪವನ್ನ ನಾಳೆಗೆ ಮುಂದೂಡಲಾಗಿದೆ. ರಾಜ್ಯಸಭೆಯಲ್ಲಿ ದೆಹಲಿ ಹಿಂಸಾಚಾರದ ಗದ್ದಲ, ಗಲಾಟೆ ಜೋರಾದ ಹಿನ್ನೆಲೆಯಲ್ಲಿ ರಾಜ್ಯಸಭಾ ಸ್ಪೀಕರ್ ವೆಂಕಯ್ಯನಾಯ್ಡು, ಕಲಾಪವನ್ನ ನಾಳೆಗೆ ಮುಂದೂಡಿದ್ದಾರೆ.

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷಗಳ ನಾಯಕರು ಕೇಳಿಕೊಂಡಿದ್ದಾರೆ. ಶೂನ್ಯ ವೇಳೆಯಲ್ಲಿ ಕೊಡಲಾಗುವುದು ಎಂದು ಸ್ಪೀಕರ್ ಹೇಳಿದ್ದಾರೆ. ಇದಕ್ಕೆ ಒಪ್ಪದ ವಿಪಕ್ಷಗಳ ನಾಯಕರು ಕೋಲಾಹಲ ಎಬ್ಬಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಕೇಂದ್ರ ಗೃಹ ಸಚಿವ ಅಮಿತ ಶಾ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸ್ಪೀಕರ್ ವೆಂಕಯ್ಯನಾಯ್ಡು ಶಾಂತವಾಗಿರಿಯೆಂದು ಕೇಳಿದ್ರೂ ಗಲಾಟೆ ಮುಂದುವರೆಸಿದ್ದಾರೆ. ಹೀಗಾಗಿ ಕಲಾಪನ್ನ ನಾಳೆಗೆ ಮುಂದೂಡಲಾಗಿದೆ.




Leave a Reply

Your email address will not be published. Required fields are marked *

error: Content is protected !!