ರಾಜ್ಯಸಭೆಗೆ ನಾಲ್ವರು ಅವಿರೋಧ ಆಯ್ಕೆ

447

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಿಂದ ನಾಲ್ವರು ರಾಜ್ಯಸಭೆ ಅವಿರೋಧ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ನಿಂದ ಹೆಚ್.ಡಿ ದೇವೇಗೌಡ, ಬಿಜೆಪಿಯಿಂದ ಅಶೋಕ ಗಸ್ತಿ ಹಾಗೂ ಈರಣ್ಣ ಕಡಾಡಿ ಆಯ್ಕೆ ಆಗಿದ್ದಾರೆ.

ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು. ನಾಮಪತ್ರ ಸಲ್ಲಿಕೆಯ ಸಮಯ ಮುಗಿದಿದೆ. ಹೀಗಾಗಿ ಈ ನಾಲ್ವರು ಹೊರತು ಬೇರೆ ಯಾರೂ ಸ್ಪರ್ಧೆ ಮಾಡಿಲ್ಲ. ಇದ್ರಿಂದಾಗಿ ಇವರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಹಾಗೂ ರಾಜ್ಯಸಭೆ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!