ಬೆಂಗಳೂರು: ಕರ್ನಾಟಕ ಸರ್ಕಾರ 2019ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟಣೆ ಮಾಡಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.
ಸಿಎಂ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ನೇತೃತ್ವದ ಸಮಿತಿ ಅರ್ಹರ ಸಾಧಕರನ್ನ ಆಯ್ಕೆ ಮಾಡಿದೆ. ನವೆಂಬರ್ 1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ವಿವಿಧ ಕ್ಷೇತ್ರಗಳಿಂದ 1,700 ಅರ್ಜಿಗಳು ಬಂದಿದ್ವು. ಅವುಗಳಲ್ಲಿ 64 ಜನ ಸಾಧಕರನ್ನ ಗುರುತಿಸಲಾಗಿದೆ. ಕಳೆದ ಬಾರಿ 63 ಜನರಿಗೆ ಪ್ರಶಸ್ತಿ ನೀಡಲಾಗಿತ್ತು. ಪ್ರಶಸ್ತಿ ಪುರಸ್ಕೃತರ ಲಿಸ್ಟ್ ಇಲ್ಲಿದೆ.