ಟಿಕಾಯತ್ ಮೇಲೆ ಮಸಿ ಹಿಂದೆ ಜನಪ್ರಿಯತೆ ಹುಚ್ಚು!

177

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರೈತ ನಾಯಕರಾಗಿರುವ ರಾಕೇಶ್ ಟಿಕಾಯತ್ ಅವರ ಮೇಲೆ ಕಪ್ಪು ಮಸಿ ಎರೆಚಿ ಹಲ್ಲೆ ಮಾಡಲಾದ ಘಟನೆ ಹಿಂದಿನ ಉದ್ದೇಶ ಬಹಿರಂಗವಾಗಿದೆ. ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿರುವ ಆರೋಪಿಗಳನ್ನು ವಿಚಾರಣೆ ನಡೆಸಿದಾಗ, ಪ್ರಚಾರದ ಕಾರಣಕ್ಕೆ ಹೀಗೆ ಮಾಡಿರುವುದಾಗಿ ಹೇಳಿದ್ದಾರಂತೆ.

ಪ್ರಕರಣದ ಪ್ರಮುಖ ಆರೋಪಿ ಭರತ್ ಶೆಟ್ಟಿ, ಹೀಗೆ ಮಾಡಿ ಮೋದಿ ಎಂದು ಘೋಷಣೆ ಕೂಗಿದರೆ ತಮಗೆ ಭಾರೀ ಜನಪ್ರತಿಯತೆ ಸಿಗುತ್ತೆ. ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಬಹುದು ಅನ್ನೋ ಲೆಕ್ಕಾಚಾರ ಮಾಡಲಾಗಿತ್ತು ಎಂದಿದ್ದಾರಂತೆ. ಈತನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ವಂಚನೆ, ಬೆದರಿಕೆ, ನಕಲಿ ದಾಖಲೆ ಸೃಷ್ಟಿಸಿದ ಪ್ರಕರಣ ದಾಖಲಾಗಿತ್ತು.

ಇನ್ನೊಬ್ಬ ಆರೋಪಿ ಶಿವಕುಮಾರ್, ಸಹೋದರಿ ಪತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ, ಸನ್ನಡತೆ ಆಧಾರದ ಮೇಲೆ ಕೆಲ ವರ್ಷಗಳ ಹಿಂದೆ ಬಿಡುಗಡೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!