ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ಲಕ್ಷ್ಮಣ ಸವದಿ, ನಾನೇ ಲಕ್ಷ್ಮಣ ಇದೀನಿ. ಈಗ ಹೋಗಲ್ಲ. ಮುಂದೆ ಯಾವಾಗದರೂ ಹೋಗುತ್ತೇನೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಪ್ರತಿಕ್ರಿಯೆ ನೀಡಿದ ಸವದಿ, ಈ ರೀತಿ ಹೇಳಿಕೆಯಿಂದ ಅವರ ಗೌರವವೇ ಕಡಿಮೆಯಾಗುತ್ತೆ ಅನ್ನೋ ಸಾಮಾನ್ಯ ಜ್ಞಾನ ಸಹ ಇಲ್ಲ. 5 ವರ್ಷ ನಾಮಪತ್ತೆಯಾಗಿದ್ದರು. ಟಿಕೆಟ್ ಪಡೆಯಲು ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.