ನವದೆಹಲಿ: ಅಯೋದ್ಯೆಯಲ್ಲಿರುವ ರಾಮ ಜನ್ಮಭೂಮಿ ಹಾಗೂ ಬಾಬ್ರಿ ಮಸೀದಿಗೆ ಸಂಬಂಧಿಸಿದ ಆಸ್ತಿ ಹಕ್ಕು ಪ್ರಕರಣದಲ್ಲಿನ ಮಧ್ಯಸ್ಥಿಕೆ ವಹಿಸಿಕೊಂಡಿರುವ ಸಮಿತಿ, ಯಾವುದೇ ಪ್ರಗತಿ ಸಾಧಿಸಿಲ್ಲ ಎಂದು ಅರ್ಜಿದಾರರು ತಿಳಿಸಿದ್ದಾರೆ. ಹೀಗಾಗಿ ಇಂದು ಸುಪ್ರೀಂ ಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.
ಮುಖ್ಯ ನ್ಯಾಯಮೂರ್ತಿ ರಂಜನ ಗೊಗಾಯ್ ಅವರ ನೇತೃತ್ವದ ನ್ಯಾಯಪೀಠ ಈ ಕುರಿತು ನಿರ್ಣಯ ತೆಗೆದುಕೊಳ್ಳಲಿದೆ. ಈ ಪ್ರಕರಣವನ್ನ ಮಾತುಕತೆ ಮೂಲಕ ಆಗಸ್ಟ್ 15ರೊಳಗೆ ಪರಿಹಾರ ಕಂಡುಕೊಳ್ಳುವಂತೆ ಮಧ್ಯಸ್ಥಿತಿಕೆ ಸಮಿತಿಗೆ ತಿಳಿಸಲಾಗಿತ್ತು. ಆದ್ರೆ, ಸಂಧಾನ ಸಮಿತಿಯ ಕಾರ್ಯ ತುಂಬಾ ವಿಳಂಭವಾಗಿದೆ. ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿಲ್ಲ. ಹೀಗಾಗಿ ಕೋರ್ಟ್ ಮೂಲಕವೇ ನ್ಯಾಯ ಪಡೆಯುವುದು ಪರಿಹಾರ ಎಂದು ಅರ್ಜಿದಾರ ಗೋಪಾಲ ಸಿಂಗ್ ವಿಶಾರದ್ ಹೇಳಿದ್ದಾರೆ.
ಮಖ್ಯ ನ್ಯಾಯಮೂರ್ತಿ ರಂಜನ ಗೊಗಯ್, ಜಸ್ಟೀಸ್ ಚಂದ್ರಚೂಡ, ಜಸ್ಟೀಸ್ ಭೂಷಣ ಹಾಗೂ ಜಸ್ಟೀಸ್ ಅಬ್ದುಲ ನಜೀರ ಅವರನ್ನೊಳಗೊಂಡ ನ್ಯಾಯಪೀಠವು ಸಂಧಾನ ಪ್ರಗತಿ ಬಗ್ಗೆ ತಿಳಿಸಲು ಅರ್ಜಿದಾರರಿಗೆ ಸೂಚಿಸಿತ್ತು. ನ್ಯಾ.ಇಬ್ರಾಹಿಂ ಖಾಲಿಫುಲ್ಲಾ, ಶ್ರೀರವಿಶಂಕರ ಗುರೂಜಿ, ಶ್ರೀರಾಮ ಪಂಚು ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ. ನಾಲ್ಕು ವಾರದೊಳಗೆ ಸಂಧಾನ ಕಾರ್ಯ ಆರಂಭಿಸಿ, 8 ತಿಂಗಳೊಳಗೆ ಮುಗಿಸಿ ಎಂದು ಸೂಚಿಸಲಾಗಿತ್ತು. ಆದ್ರೆ, ಹೆಚ್ಚಿನ ಕಾಲಾವಕಾಶ ಕೇಳಿದ್ರಿಂದ ಆಗಸ್ಟ್ 15ರ ತನಕ ಅವಕಾಶ ನೀಡಲಾಗಿದೆ.