ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ 32 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಇದರಲ್ಲಿಯೂ ಕೆಲವರಿಗೆ ಅಸಮಾಧಾನ ಮೂಡಿದೆ. ಹೀಗಾಗಿ ಕೆಲವರು ತಮಗೆ ನೀಡಿದ ಖಾತೆಯನ್ನು ಬದಲಾಯಿಸಿ ಎನ್ನುತ್ತಿದ್ದಾರಂತೆ. ಅದರಲ್ಲಿ ರಾಮಲಿಂಗಾರೆಡ್ಡಿ ಸಹ ಒಬ್ಬರು.
ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ನೀಡಲಾಗಿದೆ. ಇದನ್ನು ತಿರಸ್ಕರಿಸಿರುವ ಅವರು, ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿದ್ದಾರಂತೆ. ಖಾತೆ ಬದಲಾವಣೆ ಮಾಡದಿದ್ದರೆ ರಾಜೀನಾಮೆ ಕೊಡುವ ಬೆದರಿಕೆ ಹಾಖಿದ್ದಾರೆ ಅಂತಾ ಹೇಳಲಾಗುತ್ತಿದೆ. ಹೀಗಾಗಿ ಆರಂಭದಲ್ಲಿಯೇ ಸಿಎಂ ಸಿದ್ದರಾಮಯ್ಯಗೆ ಸಚಿವರ ವಿರೋಧ ಕೇಳಿ ಬರುತ್ತಿದೆ.