ಪ್ರಜಾಸ್ತ್ರ ಸುದ್ದಿ
ನವದೆಹಲಿ: ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ರಾಮಮಂದಿರ ಭೂಮಿಪೂಜೆ ಕಾರ್ಯಕ್ರಮದಲ್ಲಿ ಉ್ರಗರು ದಾಳಿ ನಡೆಸಲು ಪ್ಲಾನ್ ಮಾಡಿದ್ದಾರೆ ಎಂದು ಗುಪ್ತಚರ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ಇದು ಅಲ್ದೇ ಆಗಸ್ಟ್ 15ರ ಸ್ವಾತ್ರಂತ್ಯ ದಿನಾಚರಣೆ ದಿನವೂ ದಾಳಿಗೆ ಸಂಚು ರೂಪಸಿದೆಯಂತೆ.
ಭಾರತದ ಧಾರ್ಮಿಕ ಕ್ಷೇತ್ರಗಳ ಮೇಲೆ ದಾಳಿ ನಡೆಸಲು ಅಫ್ಘಾನಿಸ್ತಾನದ ಲಷ್ಕರ್ ಇ ತೊಯ್ಬಾ ಹಾಗೂ ಜೈಷ್ ಎ ಮೊಹಮ್ಮದ್ ಸಂಘಟನೆಗಳಿಗೆ ಐಎಸ್ಐ ತರಬೇತಿ ನೀಡ್ತಿದೆ ಎಂದು ಗುಪ್ತಚರ ಇಲಾಖೆಯಿಂದ ತಿಳಿದು ಬಂದಿದೆ. ಇದಕ್ಕಾಗಿ 3 ರಿಂದ 5 ಗುಂಪುಗಳು ಭಾರತಕ್ಕೆ ನುಸುಳಲಿವೆ ಎಂದು ಕೇಂದ್ರಕ್ಕೆ ಮಾಹಿತಿ ನೀಡಿದೆ.