ಪ್ರಜಾಸ್ತ್ರ ಸುದ್ದಿ
ನವದೆಹಲಿ: ನಿನ್ನೆ ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರ ಭೂಮಿಪೂಜೆ ಕಾರ್ಯಕ್ರಮ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಹೇಳಿದ್ದಾರೆ. ಪಕ್ಷವೊಂದು ತನ್ನ ರಾಜಕೀಯ ಉದ್ದೇಶಕ್ಕೆ ಮಾಡಿಕೊಂಡ ಅನುಕೂಲಸಿಂಧು ಕಾರ್ಯಕ್ರಮವಾಗಿತ್ತು ಎಂದಿದ್ದಾರೆ.
ರಾಮ ಜನ್ಮಭೂಮಿ ಟ್ರಸ್ಟ್ ದೇವಾಲಯ ನಿರ್ಮಾಣ ಮಾಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಕೋರ್ಟ್ ಆದೇಶ ಧಿಕ್ಕರಿಸಿ, ಸಿಎಂ ,ರಾಜ್ಯಪಾಲರ ಸಮ್ಮುಖದಲ್ಲಿ ಸರ್ಕಾರ ತೆಗೆದುಕೊಂಡ ಈ ಕಾರ್ಯಕ್ರಮ ಪ್ರಜಾಪ್ರಭುತ್ವ ರೂಪವನ್ನೇ ನಿರಾಕರಿಸಿದಂತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ ಕೋವಿಡ್ 19 ಮಾರ್ಗಸೂಚಿ ಅನ್ವಯ ಧಾರ್ಮಿಕ ಕಾರ್ಯಕ್ರಮಗಳಿಗೆ ಜನರನ್ನ ಸೇರಿಸಬಾರದು ಎಂದಿದೆ. ಆದ್ರೆ, ಕೋವಿಡ್ ಶಿಷ್ಟಾಚಾರ ಉಲ್ಲಂಘಿಸಿ, ಕಾರ್ಯಕ್ರಮವನ್ನ ಸರ್ಕಾರದ ಮಾಧ್ಯಮ ಡಿಡಿ ನ್ಯಾಷನಲ್ ನಲ್ಲಿ ಪ್ರಸಾರ ಮಾಡಿದ್ದು ಕಾನೂನು ಉಲ್ಲಂಘನೆಯಾಗಿದೆ ಎಂದು ಸೀತಾರಾಮ ಯೆಚೂರಿ ಪ್ರಶ್ನೆ ಮಾಡಿದ್ದಾರೆ.