ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸೋಮವಾರ ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಎದುರು ಸಚಿವ ಅಶ್ವಥನಾರಾಯಣ್ ಹಾಗೂ ಸಂಸದ ಡಿ.ಕೆ ಸುರೇಶ್ ನಡುವೆ ಭಾರೀ ವಾಗ್ವಾದ ನಡೆದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜನಸಾಮಾನ್ಯರಿಂದ ಹಿಡಿದು ಎಲ್ಲರೂ ಆಕ್ರೋಶ ಹೊರ ಹಾಕುತ್ತಿದ್ದು, ಇದಕ್ಕೆಲ್ಲ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಈ ಘಟನೆ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಕೊತ್ವಾಲನ ಶಿಷ್ಯರಿಗೆ ಬಿಜೆಪಿ ಸಚಿವರು ಬಿಸಿ ತುಪ್ಪವಾಗಿದ್ದಾರೆ. ಹೀಗಾಗಿ ಸಿಎಂ ಇದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಸೃಷ್ಟಿಸಿದೆ. ಇದರು ಕಾಂಗ್ರೆಸ್ ಪೂರ್ವ ನಿಯೋಜಿತ ಎಂದು ವಾಗ್ದಾಳಿ ನಡೆಸಿದೆ.