ಪ್ರಜಾಸ್ತ್ರ ಸುದ್ದಿ
ಬೆಂಗಳೂರು: 40 ವಕೀಲರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎನ್ನುವ ಆರೋಪ ಸಂಬಂಧ ರಾಮನಗರದ ಐಜೂರು ಪೊಲೀಸ್ ಠಾಣೆ ಪಿಎಸ್ಐ ಸಯ್ಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಲಾಗಿದೆ. ವಿಧಾನಸಭೆ ಕಲಾಪದಲ್ಲಿ ಬುಧವಾರ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಪಿಎಸ್ಐ ಅಮಾನತುಗೊಳಿಸಬೇಕೆಂದು ಕಳೆದ 10 ದಿನಗಳಿಂದ ವಕೀಲರು ಪ್ರತಿಭಟನೆ ನಡೆಸುತ್ತಿದ್ದರು. ವಿಪಕ್ಷ ನಾಯಕ ಆರ್.ಅಶೋಕ್, ಕುಮಾರಸ್ವಾಮಿ ಹಾಗೂ ಸಿ.ಪಿ ಯೋಗೇಶ್ವರ್ ಇವರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದರು. ಮಂಗಳವಾರ ಕಲಾಪದಲ್ಲಿ ಪಿಎಸ್ಐ ಅಮಾನತಿಗೆ ಒತ್ತಾಯಿಸಿದ್ದರು.
ಇಂದು ಅಮಾನತು ವಿಚಾರವನ್ನು ಗೃಹ ಸಚಿವರು ತಿಳಿಸಿದರು. ಜೊತೆಗೆ ಈ ಘಟನೆ ಕಾರಣರಾದ ವಕೀಲ ಚಾನ್ ಪಾಷ ವಿರುದ್ಧ ಕ್ರಮ ತೆಗೆದುಕೊಳ್ಳುವ ಕುರಿತು ಸಹ ಸಚಿವರು ಭರವಸೆ ನೀಡಿದ್ದಾರೆ.