ರಾಮದೇವ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ

77

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪತಂಜಲಿ ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಯೋಗ ಗುರು ರಾಮದೇವ್ ಹಾಗೂ ಕೇಂದ್ರದ ವಿರುದ್ಧ ಕಿಡಿ ಕಾರಿದ್ದು, ಭೇಷರತ್ ಕ್ಷಮೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಪತಂಜಲಿ ಸಂಸ್ಥಾಪಕರಾದ ರಾಮದೇವ್ ಹಾಗೂ ಬಾಲಕೃಷ್ಣ ಅವರು ಸಲ್ಲಿಸಿದ್ದ ಕ್ಷಮೆಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ ನಾವೇನೂ ಕುರುಡರಲ್ಲ. ಈ ಪ್ರಕರಣದಲ್ಲಿ ಉದಾರವಾಗಿರಲು ನಾವು ಬಯಸುವುದಿಲ್ಲ ಎಂದು ಹೇಳಿದೆ.

ಇನ್ನು ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಉತ್ತರದಿಂದಲೂ ಕೋರ್ಟ್ ತೃಪ್ತಿಯಾಗಿಲ್ಲ ಎಂದು ತರಾಟೆ ತೆಗೆದುಕೊಂಡಿದೆ. ರಾಮದೇವ್ ಅವರು ಮಾಧ್ಯಮದಲ್ಲಿ ಕ್ಷಮೆಯಾಚಿಸಿರುವುದನ್ನು ಗಮನಿಸಿದೆ. ಆದರೆ ಅವರು ಉದ್ದೇಶಪೂರ್ವಕವಾಗಿ ಉಲ್ಲಂಘನೆ ಎಂದು ನ್ಯಾ ಹಿಮಾ ಕೊಹ್ಲಿ ಹಾಗೂ ನ್ಯಾ ಎ.ಅಮಾನುಲ್ಲಾ ಅವರ ಪೀಠ ಹೇಳಿದೆ.




Leave a Reply

Your email address will not be published. Required fields are marked *

error: Content is protected !!