ಪ್ರಜಾಸ್ತ್ರ ಸುದ್ದಿ
ವಿಜಯಪುರ: ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈಗಾಗ್ಲೇ 7 ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸಿದ್ದಾರೆ. ಇದೀಗ ಯುವತಿಯ ಸಂಬಂಧಿಕರ ಮನೆ ಬಾಗಿಲಿಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.
ವಿಜಯಪುರ ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ನಿಡಗುಂದಿಯಲ್ಲಿರುವ ಯುವತಿಯ ಅಜ್ಜಿಯ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ. ಬೆಂಗಳೂರಿನಿಂದ ಬಂದ ಪೊಲೀಸ್ ತಂಡ ಯುವತಿಯ ಅಜ್ಜಿಯ ಮನೆಗೆ ನೋಟಿಸ್ ಅಂಟಿಸಿ, ಫೋನ್ ನಂಬರ್ ಅಥವಾ ಇ-ಮೇಲ್ ಗೆ ಸಂಪರ್ಕಿಸುವಂತೆ ಸೂಚನೆ ನೀಡಿದ್ದಾರೆ.
ಇನ್ನು ಯುವತಿಯನ್ನ ಇಬ್ಬರು ಯುವಕರ ಜೊತೆಯಲ್ಲಿ ಹೈದ್ರಾಬಾದ್ ನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗ್ತಿದೆ. ಮೂವರನ್ನ ಬೆಂಗಳೂರಿಗೆ ಕರೆದುಕೊಂಡು ಬರಲಾಗ್ತಿದ್ದು, ಮಡಿವಾಳದಲ್ಲಿರುವ ಪೊಲೀಸ್ ಟೆಕ್ನಿಕಲ್ ಸೆಂಟರ್ ಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ.