ಪ್ರಜಾಸ್ತ್ರ ಸುದ್ದಿ
ಧಾರವಾಡ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಬಿಟ್ಟು ಜೆಡಿಎಸ್ ಗೆ ಹೋಗುವುದಿಲ್ಲ. ಅವರಿಗೆ ಬಿಜೆಪಿಯಲ್ಲಿ ಭವಿಷ್ಯವಿದೆ. ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸಚಿವರಾಗುವವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಅವರ ಹೆಸರಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಬಿಜೆಪಿ ತೊರೆಯುವುದಿಲ್ಲ ಅನ್ನೋ ವಿಶ್ವಾಸವಿದೆ. ಜೆಡಿಎಸ್ ಸೇರಿದರೆ ಏನಾಗುತ್ತದೆ. ಬಿಜೆಪಿಯಲ್ಲಿ ಭವಿಷ್ಯವಿದೆ. ರಮೇಶ್ ಜಾರಕಿಹೊಳಿ ಸಚಿವರಾಗುತ್ತಾರೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದಿದ್ದಾರೆ.