ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಸಿಲುಕಿಹಾಕಿಕೊಂಡಿರುವ ರಮೇಶ ಜಾರಕಿಹೊಳಿ ಪರವಾಗಿ ವಾಲ್ಮೀಕಿ ಪೀಠದ ಸ್ವಾಮೀಜಿ ಮಾತ್ನಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು, ರಮೇಶ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.
ರಮೇಶ ಜಾರಕಿಹೊಳಿ ಯಾವುದೇ ತಪ್ಪು ಮಾಡದಿದ್ರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳು ಅದನ್ನ ಇಷ್ಟು ಬೇಗ ಅಂಗೀಕರಿಸಬಾರದಿತ್ತು. ಅವರನ್ನ ಸಂಪುಟದಲ್ಲಿ ಉಳಿಸಿಕೊಂಡು ತನಿಖೆ ನಡೆಸಬಹುದಿತ್ತು. ಹೀಗಾಗಿ ಅವರನ್ನ ವಾಪಸ್ ಸಚಿವರನ್ನಾಗಿ ಮಾಡಬೇಕು ಎಂದು ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ.