ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ದಿ.ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ಪ್ರಕರಣ ಸಂಬಂಧ ಪ್ರಮುಖ ಶಂಕಿತರಾದ ಮುಸಾವೀರ್ ಹುಸೇನ್ ಸಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಪಶ್ವಿಮ ಬಂಗಾಳದ ಕೋಲ್ಕತ್ತಾದಲ್ಲಿ ವಶಕ್ಕೆ ಪಡೆಯಲಾಗಿದೆ. ಸಾಕ್ಷಿ ಸಂಬಂಧ ಶಂಕಿತರ ಸ್ನೇಹಿತರು, ಸಹಪಾಠಿಗಳ ವಿಚಾರಣೆ ನಡೆಸಲಾಗುತ್ತಿದೆ. ಮುಸಾವೀರ್ ಹಾಗೂ ಅಬ್ದುಲ್ ಮಥೀನ್ ಇಬ್ಬರು ಶಿವಮೊಗ್ಗದ ತೀರ್ಥಹಳ್ಳಿಯವರು ಎಂದು ಹೇಳಲಾಗುತ್ತಿದೆ.
ಘಟನೆ ಬಳಿಕ ತಲೆ ಮರೆಸಿಕೊಂಡಿದ್ದರು. ಮಥೀನ್ ಸಂಚು ರೂಪಿಸಿದ್ದ. ಮುಸಾವೀರ್ ಬಾಂಬ್ ಇಟ್ಟಿದ್ದ. ಇವರನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.