ಕೇಂದ್ರ ಸಚಿವೆ ಕರಂದ್ಲಾಜೆ ವಿರುದ್ಧ ಎಫ್ಐಆರ್

103

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದಲ್ಲಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ತಮಿಳುನಾಡಿನ ಸಂಬಂಧವಿದೆ ಎಂದು ಹೇಳಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮಧುರೈ ಸಿಟಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಡಿಎಂಕೆ ಕಾರ್ಯಕರ್ತರು ಬುಧವಾರ ಪ್ರಕರಣ ದಾಖಲಿಸಿದ್ದಾರೆ. ಸೆಕ್ಷನ್ 153ಎ, 505(1),(ಬಿ) ಹಾಗೂ 505(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸಂಬಂಧ ಸಚಿವೆ ಪ್ರತಿಕ್ರಿಯೆ ನೀಡಿದ್ದು, ತಮಿಳುನಾಡಿನ ನನ್ನ ಸಹೋದರ, ಸಹೋದರಿಯರೆ ನನ್ನ ಹೇಳಿಕೆ ಬಗ್ಗೆ ಸ್ಪಷ್ಟತೆ ನೀಡುತ್ತಿದ್ದು, ಜಾತಿ ಆಧಾರದ ಮೇಲೆ ಹೇಳಿಕೆ ನೀಡಿಲ್ಲ. ಇದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!