ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದಲ್ಲಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಬೆಂಗಳೂರು ಹಾಗೂ ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿದ್ದಾರೆ. ಈಗಾಗ್ಲೇ ಹಲವರನ್ನು ವಶಕ್ಕೆ ಪಡೆದಿರುವ ತನಿಖಾ ತಂಡ, ಇಂದು ಕೆಲವು ಕಡೆ ದಾಳಿ ನಡೆಸಿದೆ.
ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿನ ಕೆಲವರ ಮನೆಗಳು ಹಾಗೂ ತೀರ್ಥಹಳ್ಳಿಯಲ್ಲಿನ ಕೆಲವರ ಮನೆಗಳ ಮೇಲೆ ದಾಳಿ ಮಾಡಿ ಶೋಧ ನಡೆಸಲಾಗಿದೆ. ಐಎಸ್ ಜೊತೆಗೆ ಸಂಬಂಧ ಹೊಂದಿರುವ ಶಂಕಿತರು ಕರ್ನಾಟಕ, ತಮಿಳುನಾಡಿನಲ್ಲಿ ಕೃತ್ಯವೆಸಗಲು ಈ ಭಾಗದಲೆಲ್ಲ ಸಭೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ.