ರಾಮಮಂದಿರ ಭೂಮಿ ಪೂಜೆಯಲ್ಲಿ ಮುಸ್ಲಿಂರು ಭಾಗಿ!

440

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಆಗಸ್ಟ್ 5ರಂದು ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ನಡೆಯಲಿದೆ. ಇದಕ್ಕಾಗಿ ಪ್ರಧಾನಿ ಮೋದಿ, ಬಿಜೆಪಿ ಹಿರಿಯ ನಾಯಕ ಲಾಲಕೃಷ್ಣ ಅಡ್ವಾಣಿ, ಆರ್ ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್ ಸೇರಿ ಕೆಲ ಧಾರ್ಮಿಕ ಮುಖಂಡರು ಭಾಗವಹಿಸಿದ್ದಾರೆ.

ಈ ಸಮಾರಂಭದಲ್ಲಿ ಮುಸ್ಲಿಂ ಬಾಂಧವರು ಭಾಗವಹಿಸಲು ಮನಸ್ಸು ಮಾಡಿದ್ದು, ರಾಮನನ್ನ ಇಮಾಮ್ ಏ ಹಿಂದ್ ಎಂದು ಭಾವಿಸಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಛತ್ತೀಸಗಡದಿಂದ ಮುಸ್ಲಿಂ ವ್ಯಕ್ತಿಯೊಬ್ಬ ಇಟ್ಟಿಗೆ ಹೊತ್ತು ಬರುವುದಾಗಿ ಮುಸ್ಲಿಂ ರಾಷ್ಟ್ರೀಯ ಮಂಚ್ ಅವದ್ ಪ್ರಾಂತ್ಯದ ಉಸ್ತುವಾರಿ ತಿಳಿಸಿದ್ದಾರೆ.

ಫೈಜಾಬಾದ್ ನ ವಾಸಿ ಹೈದರ್, ರಶೀದ್ ಅನ್ಸಾರಿ, ಜಮಶೆಡ್ ಖಾನ್ ಸೇರಿದಂತೆ ಅನೇಕರು ಈ ಸಮಾರಂಭದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ನಿಜವಾದ್ರೆ ಇದು ಕೋಮುಸೌಹಾರ್ದತೆಗೆ ಸಾಕ್ಷಿಯಾಗಲಿದೆ. ದಶಕಗಳಿಂದ ರಾಮಜನ್ಮ ಭೂಮಿ ವಿವಾದ 2019, ನವೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿತು.




Leave a Reply

Your email address will not be published. Required fields are marked *

error: Content is protected !!