ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಾಳೆ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಇದರ ನಡುವೆ ಉ್ರಗರ ಕರಿನೆರಳು ಬೀಳುವ ಸಾಧ್ಯತೆ ಸಹ ಇದೆ ಅನ್ನೋದನ್ನ ಕೆಲ ದಿನಗಳ ಹಿಂದೆಯೇ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ನಾಳೆ ಭೂಮಿಪೂಜೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿರುವ ಅವರು, ರಾಜ್ಯದಲ್ಲಿ ಯಾವುದೇ ರೀತಿಯಿಂದ ಅಹಿತಕರ ಘಟನೆ ನಡೆಯಬಾರದು. ಕಾನೂನು ಸುವ್ಯಸ್ಥೆ ಕಾಪಾಡುವ ದೃಷ್ಟಿಯಿಂದ ಕಟ್ಟು ನಿಟ್ಟಿನ ಕ್ರಮಗಳನ್ನ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ.