ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ್: ರಾಜ್ಯಪಾಲರ ಬಳಿ ದೂರಿಗೆ ಬಿಜೆಪಿ ಸಿದ್ಧ

98

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ಶಾಂಗ್ರಿಲಾ ಹೋಟೆಲ್ ನಲ್ಲಿ ಬಿಬಿಎಂಪಿ ಅಧಿಕಾರಿಗಳ ಸಭೆಯಲ್ಲಿ ಸಚಿವರೊಂದಿಗೆ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸುರ್ಜೇವಾಲ್ ಭಾಗವಹಿಸಿದ್ದು, ಇದರ ವಿರುದ್ಧ ಬಿಜೆಪಿ, ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಎಟಿಎಂ ಸರ್ಕಾರದ ರಹಸ್ಯವೇನು ಎಂದಿದೆ. ರಾಜ್ಯ ಸರಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರಿಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ..? ಇದು 85% ಡೀಲ್‌ ಫಿಕ್ಸಿಂಗ್ ಸಭೆಯೇ ಎಂದು ಪ್ರಶ್ನಿಸಿದೆ.

ಇನ್ನು ಈ ಸಂಬಂಧ ರಾಜ್ಯಪಾಲರಿಗೆ ಇಂದು ಮಧ್ಯಾಹ್ನ 12ಗಂಟೆಗೆ ದೂರು ಸಲ್ಲಿಸಲು ಬಿಜೆಪಿ ಸಜ್ಜಾಗಿದೆ. ಇದಕ್ಕೆ ಕಾಂಗ್ರೆಸ್ ಯಾವ ರೀತಿ ಉತ್ತರಿಸುತ್ತೆ? ಹೇಗೆ ಸಮರ್ಥಿಸಿಕೊಳ್ಳುತ್ತೆ ಅನ್ನೋದು ಕಾದು ನೋಡಬೇಕು.




Leave a Reply

Your email address will not be published. Required fields are marked *

error: Content is protected !!