ಪ್ರಜಾಸ್ತ್ರ ಸುದ್ದಿ
ರಾಯಚೂರು: ಸಿಂಧನೂರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಂಗಮಂದಿರಕ್ಕೆ ದಿವಂಗತ ನಟ ಡಾ.ಪುನೀತ್ ರಾಜಕುಮಾರ್ ಹೆಸರು ಇಡುವ ಸಂಬಂಧ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪಿಎಸ್ಐ ಅವರನ್ನು ಎಳೆದಾಡಿ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ನಗರದ ಸುಕಾಲಪೇಟೆಯಲ್ಲಿ ರಂಗಮಂದಿರ ನಿರ್ಮಿಸಲಾಗಿದೆ. ಇದಕ್ಕೆ ಪುನೀತ್ ಅವರ ಹೆಸರು ಇಡಬೇಕು ಎಂದು ಜೆಡಿಎಸ್ ಶಾಸಕ ವೆಂಟರಾವ್ ನಾಡಗೌಡ ಪುತ್ರ ಅಭಿಷೇಕ್ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ಕಲಾವಿದರ ಹೆಸರು ಇಡಲು ಮುಂದಾಗಿದ್ದಾರೆ. ಈ ವೇಳೆ ಗಲಾಟೆ ನಡೆದಿದೆ.
ಅಪ್ಪು ಪುತ್ಥಳಿ ಮೆರವಣಿಗೆ ವೇಳೆಯೇ ಗಲಾಟೆ ಶುರುವಾಗಿ ತಳ್ಳಾಟ, ನೂಕಾಟ ನಡೆದಿದೆ. ಶಾಸಕರ ಪುತ್ರ ಅಭಿಶೇಕ್ ಗ್ರಾಮೀಣ ಠಾಣೆ ಪಿಎಸ್ಐ ಮಣಿಕಂಠ ಅವರ ಕಾಲರ್ ಹಿಡಿದು ಎಳೆದಾಡಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಇದರಿಂದಾಗಿ ನಗರದಲ್ಲಿ ಅಶಾಂತಿ ನಿರ್ಮಾಣವಾಗಿದೆ.