ಪ್ರಜಾಸ್ತ್ರ ಸುದ್ದಿ
ಮಂಡ್ಯ: ನಮ್ಮ ಸುತ್ತಮುತ್ತ ಅದೆಷ್ಟು ಕ್ರೂರಿಗಳು ಇರುತ್ತಾರೆ ಅನ್ನೋದಕ್ಕೆ ಹಲವು ಉದಾಹರಣೆಗಳಿವೆ. ಅದರಲ್ಲೂ ಅತ್ಯಾಚಾರ ಪ್ರಕರಣಗಳಲ್ಲಿ ನೀಚರು ಮಕ್ಕಳು, ವೃದ್ಧರು ಅನ್ನೋದು ನೋಡದೆ ದಾಳಿ ಮಾಡುತ್ತಾರೆ. ಇಲ್ಲೊಬ್ಬ ಶಿಕ್ಷಕ ತನ್ನ ವೃತ್ತಿಗೆ ಕಳಂಕ ತರುವ ಕೆಲಸ ಮಾಡಿದ್ದಾನೆ.
ಮಂಡ್ಯದಲ್ಲಿ ಶಿಕ್ಷಕನೊಬ್ಬ ಟೂಷನ್ ಗೆ ಬರುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಅತ್ಯಂತ ಅವಮಾನವೀಯ ಕೃತ್ಯ ನಡೆದಿದೆ. ಟ್ಯೂಷನ್ ಗೆ ಹೋಗಿದ್ದ ಬಾಲಕಿ ಸಂಪಿಯನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಟ್ಯೂಷನ್ ಹೇಳಿಕೊಡುತ್ತಿದ್ದ ಶಿಕ್ಷಕನ ವಿಚಾರಣೆ ನಡೆಸಿದಾಗ ಸತ್ಯ ಬಾಯಿಬಿಟ್ಟಿದ್ದಾನೆ.
ಕ್ರೂರಿ ಕಾಂತರಾಜ್ ಎಂಬಾತ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಮಳವಳ್ಳಿ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನೀಚನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಘಟನೆಯನ್ನು ರಾಜಕೀಯ ನಾಯಕರು ಸೇರಿದಂತೆ ಸಂಘಟನೆಗಳ ಮುಖಂಡರು ಖಂಡಿಸಿದ್ದು, ಪ್ರತಿಭಟನೆ ನಡೆಸಿ ಕಾಂತುರಾಜ್ ಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಲಾಗಿದೆ.