ಬೆಂಗಳೂರು: ಕೇರಳದ ಕಾಸರಗೋಡಿನ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಸಂಸದೆ ಶೋಭಾ ಕರಂದ್ಲಾಜೆ ಇಂದು ದೂರು ದಾಖಲಿಸಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಂಸದೆ ದೂರು ನೀಡಿದ್ದಾರೆ.
ಯುವತಿ ಮೇಲೆ ಅತ್ಯಾಚಾರವೆಸಗಿ ಮಾನಸಿಕ ಹಿಂಸೆ ಕೊಡುವುದರ ಜೊತೆ ಇಸ್ಲಾಂಗೆ ಮತಾಂತರಗೊಳ್ಳಬೇಕೆಂದು ಬೆದರಿಕೆ ನೀಡ್ತಿದ್ದ ಕಾರಣಕ್ಕೆ ಆಕೆ ಬೆಂಗಳೂರಿನಲ್ಲಿ ವಾಸಗಿದ್ದಾಳಂತೆ. ಅಲ್ಲಿ ದೂರು ಕೊಟ್ಟರೂ ಸ್ವೀಕರಿಸಿಲ್ಲ ಅನ್ನೋ ಕಾರಣಕ್ಕೆ ಯುವತಿ ಜೊತೆ ಸಂಸದೆ ಶೋಭಾ ಕರಂದ್ಲಾಜೆ ಬಂದು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.