ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ಬಿನ್ನಮಂಗಲ ವೃತ್ತದಿಂದ ಸುಮಾರು 500 ಮೀಟರ್ ವರೆಗೂ ಪ್ರಾಯೋಗಿಕವಾಗಿ ರ್ಯಾಪಿಡ್ ರಸ್ತೆ ನಿರ್ಮಿಸಲಾಗಿದೆ. ಇದನ್ನು ಗುರುವಾರ ಮುಖ್ಯಮಂತ್ರಿ ಬೊಮ್ಮಾಯಿ ಉದ್ಘಾಟಿಸಿದರು.
ರಸ್ತೆ ಉದ್ಘಾಟಿಸಿ ಮಾತನಾಡಿದ ಸಿಎಂ, ವೈಟ್ ಟಾಪಿಂಗ್ ರಸ್ತೆಗಾಗಿ ಸಾಕಷ್ಟು ಟ್ರಾಫಿಕ್ ಸಮಸ್ಯೆಯಾಗುತ್ತಿತ್ತು. ರಿಪೇರಿ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆಯಿತ್ತು. ಹೊಸ ಟೆಕ್ನಾಲಜಿಯಿಂದ ರ್ಯಾಪಿಡ್ ರಸ್ತೆ ಮಾಡಲಾಗಿದೆ. 20 ಟನ್ ಮೇಲಿರುವ ವಾಹನಗಳು ಸಂಚರಿಸಬಹುದು ಎಂದರು.
ಈ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ ಪಾಟೀಲ, ಸಿ.ವಿ ರಾಮನ್ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ರಘು, ಬಿಬಿಎಂಪಿ ಆಯುಕ್ತ ತುಷಾರ್, ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸೇರಿ ಅನೇಕರಿದ್ದರು.