ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸೌಂಡ್ ಮಾಡಿದೆ. 4 ವರ್ಷದ ಮಗುವನ್ನ ಅಪಹರಣ ಮಾಡಿ ಅತ್ಯಾಚಾರವೆಸಗಿದ್ದ ಕಾಮುಕನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಕಿರಾತಕ ದಿನೇಶ, ಭಾನುವಾರ ಮಧ್ಯಾಹ್ನ ಮೆಜೆಸ್ಟಿಕ್ ನಿಂದ 4 ವರ್ಷದ ಮಗುವನ್ನ ಅಪಹರಣ ಮಾಡಿ, ಲೈಂಗಿಕ ದೌರ್ಜನ್ಯವೆಸಗಿದ್ದ. ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಕೀಚಕ ದಿನೇಶಗಾಗಿ ನಿನ್ನೆಯಿಂದ ಪೊಲೀಸರು ಹುಡುಕಾಟ ನಡೆಸಿದ್ರು.
ದಿನೇಶ, ಆರ್.ಆರ್ ಮಂಟಪದಲ್ಲಿರುವುದು ಇಂದು ಬೆಳಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಹೀಗಾಗಿ ಬಂಧಿಸಲು ಹೋದಾಗ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಆಗ ಶ್ರೀರಾಮಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುನೀಲ ನಾಯ್ಕ ಕಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆ ಸಂಬಂಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.