ವಿಜಯಪುರ: ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ್ ಹತ್ಯೆಯ ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ. ಆರೋಪಿ ತೌಫಿಕ್ ಶೇಕ್ ಉರ್ಫ್ ಪೈಲ್ವಾನ್ ನನ್ನ ವಿಜಯಪುರ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಧೂಳಖೇಡ ಬಳಿ ಆರೋಪಿ ತೌಫಿಕ್ ಶೇಕ್ ಸಿಕ್ಕಿಬಿದ್ದಿದ್ದಾನೆ. ಬಸವನಬಾಗೇವಾಡಿ ಸಿಪಿಐ ಮಹದೇವ ಶಿರಹಟ್ಟಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ವೇಳೆ ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಕಳೆದ ಮೇ 17ರಂದು ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ್ ಹತ್ಯೆ ನಡೆದಿದ್ದು, ವಿಜಯಪುರ ಜಿಲ್ಲೆಯ ಕೋಲ್ಹಾರ ಸೇತುವೆ ಬಳಿ ಶವ ಪತ್ತೆಯಾಗಿತ್ತು.