ಪ್ರಜಾಸ್ತ್ರ ಸುದ್ದಿ
ಅಹಮದಾಬಾದ್: ಸರ್ದಾರ್ ವಲ್ಲಾಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸ ಆಚರಿಸಿಕೊಂಡು ಬರಲಾಗ್ತಿದೆ. ಇದರ ಪ್ರಯುಕ್ತ ಪ್ರಧಾನಿ ಮೋದಿ ಪಟೇಲ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ್ರು. 2 ದಿನಗಳ ಗುಜರಾತ್ ಪ್ರವಾಸದಲ್ಲಿರುವ ಮೋದಿ, ಇಂದು ಪಟೇಲರ ಏಕತಾ ಪ್ರತಿಮೆಗೆ ನಮನ ಸಲ್ಲಿಸಿದ್ರು.
ಇನ್ನು ಇಂದು ದೇಶದ ಮೊದಲ ಸಮುದ್ರ ವಿಮಾನಯಾನಕ್ಕೆ ಚಾಲನೆ ನೀಡ್ತಿದ್ದಾರೆ. ಇದರ ಜೊತೆಗೆ ಹಲವು ಕಾರ್ಯಕ್ರಮಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಶುಕ್ರವಾರ ಆರೋಗ್ಯವನ, ಏಕತಾ ಮಾಲ್, ಸರ್ದಾರ್ ಪಟೇಲ್ ವನ್ಯಮೃಗ ಪಾರ್ಕ್, ಮಕ್ಕಳ ನ್ಯೂಟ್ರಿಷಿಯನ್ ಪಾರ್ಕ್ ಸೇರಿ 17 ಕಾರ್ಯಕ್ರಮಗಳನ್ನ ಉದ್ಘಾಟನೆ ಮಾಡಿದ್ರು.