ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹೊಸ ಸರ್ಕಾರ ರಚನೆಯಾದ ನಂತರ ರೇಷನ್ ಕಾರ್ಡ್ ಕೊಡುವುದನ್ನು ನಿಲ್ಲಿಸಲಾಗಿದೆ. ತಿದ್ದುಪಡಿಗೆ ಆಗಾಗ ಅವಕಾಶ ನೀಡಿದರೂ ಸರ್ವರ್ ಸಮಸ್ಯೆಯಿಂದ ಜನರು ಹೈರಾಣಾಗಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕರು ಸದನದಲ್ಲಿ ಪ್ರಶ್ನಿಸಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆಗೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಖಾತೆ ಸಚಿವ ಕೆ.ಎಚ್.ಮುನಿಯಪ್ಪ, ಪ್ರಸ್ತುತ ನಿಲ್ಲಿಸಲಾಗಿರುವ ರೇಷನ್ ಕಾರ್ಡ್ ವಿತರಣೆ ಏಪ್ರಿಲ್ 1ರಿಂದ ಪ್ರಾರಂಭವಾಗಲಿದೆ. 2.95 ಲಕ್ಷ ಹೊಸ ಅರ್ಜಿಗಳು ಬಂದಿವೆ. ಇವುಗಳ ಪರಿಶೀಲನೆ ಕೆಲಸ ಮಾರ್ಚ್ 31ರೊಳಗೆ ಮುಗಿಯಲಿದೆ. ಏಪ್ರಿಲ್ 1ರಿಂದ ವಿಲೇವಾರಿ ಮಾಡುವುದರ ಜೊತೆಗೆ ಹೊಸದಾಗಿ ಅರ್ಜಿ ಹಾಕಲು ಸಹ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.