ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆಗೆ ಅವಕಾಶ ನೀಡಲಾಗಿದೆ. ಇದಕ್ಕೆ ಸೋಮವಾರ ಕೊನೆಯ ದಿನವೆಂದು ಹೇಳಲಾಗಿತ್ತು. ಹೀಗಾಗಿ ಸಾರ್ವಜನಿಕರು ಇದಕ್ಕಾಗಿ ಅಲೆಯುತ್ತಿದ್ದಾರೆ. ಸರ್ವಸ್ ಸಮಸ್ಯೆಯಿಂದಾಗಿ ದಿನಪೂರ್ತಿ ಕಾಯಿದರೂ ಕೆಲಸವಾಗುತ್ತಿಲ್ಲ. ಹೀಗಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ ಮಾಡಿರುವುದಾಗಿ ಹೇಳಲಾಗುತ್ತಿದೆ. ಆದರೆ, ಎಲ್ಲಿಯ ತನಕ ವಿಸ್ತರಣೆ ಮಾಡಲಾಗಿದೆ ಎಂಬುವುದರ ಸರಿಯಾದ ಮಾಹಿತಿ ದೊರೆಯುತ್ತಿಲ್ಲ. ಇನ್ನು ಹೊಸ ರೇಷನ್ ಕಾರ್ಡ್, ಮನೆ ಯಜಮಾನನ ಹೆಸರಿನಲ್ಲಿರುವ ರೇಷನ್ ಕಾರ್ಡ್ ಯಜಮಾನಿಗೆ ವರ್ಗಾಯಿಸಲು ಸಧ್ಯಕ್ಕೆ ಅವಕಾಶ ನೀಡಿಲ್ಲ.