ಪ್ರಜಾಸ್ತ್ರ ಸುದ್ದಿ
ಲಿಂಗಸೂಗೂರು: ಹಟ್ಟಿ ಚಿನ್ನದ ಗಣಿ ಪೊಲೀಸರ ಭರ್ಜರಿ ಕಾರ್ಯಚರಣೆಯಿಂದ ಜಮೀನಿನಲ್ಲಿ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಗುರುಗುಂಟಾ ಹೋಬಳಿಯ ಗುಜಲರ್ ದೊಡ್ಡಿಯ ಜಮೀನಿನಲ್ಲಿ ಗಾಂಜಾ ಬೆಳೆಯಲಾಗಿತ್ತು.
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುಜಲರ್ ದೊಡ್ಡಿ ಗ್ರಾಮದ ಪರಸಪ್ಪ ಹಾಗೂ ಅಮರೇಶ ಎಂಬುವರ ತೊಗರಿ ಬೆಳೆಯಲ್ಲಿ ಅಲ್ಲಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನ ವಶಕ್ಕೆ ಪಡೆಯಲಾಗಿದೆ. 16 ಸಾವಿರ ರೂಪಾಯಿ ಮೌಲ್ಯದ 9 ಕೆಜಿ ಗಾಂಜಾ ಹಾಗೂ ಆರೋಪಿಗಳನ್ನ ವಶಪಡಿಸಿಕೊಳ್ಳಲಾಗಿದೆ.
ಲಿಂಗಸೂಗೂರು ಡಿವೈಎಸ್ಪಿ, ಸಿಪಿಐ, ಪಿಎಸ್ಐ ಹಾಗೂ ಸಿಬ್ಬಂದಿ ಕಾರ್ಯಚಾರಣೆಯಲ್ಲಿ ಭಾಗಿಯಾಗಿದ್ರು. ಹಟ್ಟಿ ಚಿನ್ನದ ಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನ ನ್ಯಾಯಾಲಕ್ಕೆ ಒಪ್ಪಿಸಲಾಗಿದೆ.