ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕನ್ನಡಕ್ಕೆ, ಕನ್ನಡಿಗರಿಗೆ, ಕನ್ನಡ ಭಾವಟಕ್ಕೆ, ರಾಯಣ್ಣನಿಗೆ ಅವಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಈಗಾಗ್ಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದೀಗ ಮತ್ತೆ ಪುಂಡಾಟ ನಡೆಸಿದ್ದು, ರಾಯಣ್ಣನ ಬಳಿಕ ಬವಸಣ್ಣನ ಫೋಟೋಗೆ ಅವಮಾನ ಮಾಡಿದ್ದಾರೆ.
ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿನ ಬಸವೇಶ್ವರ ಸರ್ಕಲ್ ಬಳಿಯಿರುವ ಕನ್ನಡದ ಬಾವುಟಕ್ಕೆ ಬೆಂಕಿ ಹಚ್ಚಲಾಗಿದೆ. ಅಲ್ದೇ, ಅಲ್ಲಿದ್ದ ಬಸವೇಶ್ವರ ಭಾವಚಿತ್ರಕ್ಕೆ ಸಗಣಿ ಬಳೆದು ಅವಮಾನ ಮಾಡಲಾಗಿದೆ.