ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಸಂಬಂಧ ನಡೆದ ಗಲಾಟೆಯಲ್ಲಿ ಕನ್ನಡ ಹೋರಾಟಗಾರರ ಮೇಲೆ ಕೇಸ್ ಹಾಕಲಾಗಿದೆ. ಈ ಸಂಬಂಧ ಮಾತ್ನಾಡ್ತಿರುವ ಸಚಿವ ಕೆ.ಎಸ್ ಈಶ್ವರಪ್ಪ, ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸಿದ್ದೇನೆ. ಕೇಸ್ ವಾಪಸ್ ಪಡೆಯುವ ಬಗ್ಗೆ ಚರ್ಚಿಸಿದ್ದೇನೆ ಎಂದಿದ್ದಾರೆ.
ಪ್ರಕರಣ ವಾಪಸ್ ಪಡೆಯುವ ಬಗ್ಗೆ ಚರ್ಚಿಸಿದ್ದೇನೆ ಎಂದು ಸಚಿವರು ಹೇಳಿದ್ದಾರೆ. ಪೀರವಾಡಿಯಲ್ಲಿನ ಸಮಸ್ಯೆ ಇತ್ಯರ್ಥವಾಗಿರುವುದು ದೇಶದಲ್ಲಿ ಮಾದರಿ ಎಂದು ಹೇಳಿದ್ದಾರೆ. ಆದ್ರೆ, ಇದಕ್ಕೆ ಗೃಹ ಸಚಿವರ ಪ್ರತಿಕ್ರಿಯೆ ಏನಿತ್ತು? ಕನ್ನಡ ನೆಲದ ಹೋರಾಟಗಾರನ ಪ್ರತಿಮೆ ಪ್ರತಿಷ್ಠಾಪನೆಗೆ ಅಡ್ಡಿ ಪಡಿಸಲು ಮರಾಠಿಗರು ಯಾರು? ಹೋರಾಟ ಮಾಡಿದ ಕನ್ನಡಿಗರ ಮೇಲೆ ಕೇಸ್ ಹಾಕಿರುವುದು ಎಷ್ಟು ಸರಿ ಅನ್ನೋದು ತಿಳಿಯಬೇಕಿದೆ.