ರಾಹುಲ್ ಗಾಂಧಿ ಜೊತೆಗೆ ಆರ್ ಬಿಐ ಮಾಜಿ ಗವರ್ನರ್ ಹೆಜ್ಜೆ

162

ಪ್ರಜಾಸ್ತ್ರ ಸುದ್ದಿ

ರಾಜಸ್ಥಾನ: ಭಾರತ ಐಕ್ಯತಾ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ನೇತೃತ್ವದ ತಂಡದೊಂದಿಗೆ ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಬುಧವಾರ ಹೆಜ್ಜೆ ಹಾಕಿದ್ದಾರೆ. ರಾಹುಲ್ ಗಾಂಧಿ, ಸಚಿನ್ ಪೈಲೆಟ್ ಜೊತೆ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ.

ಸೆಪ್ಟೆಂಬರ್ 7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿರುವ ಯಾತ್ರೆ ಈಗ ರಾಜಸ್ಥಾನ ಪ್ರವೇಶಿಸಿದೆ. ಬುಧವಾರ ಸವಾಯಿ ಮಾಧೋಪುರದ ಭಡೋತಿಯಿಂದ ಪುನರಾರಂಭಿಸಿತು. ಈ ಯಾತ್ರೆ 100 ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಜೈಪುರದಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ರ್ಯಾಲಿಯಲ್ಲಿ ಸಿನಿಮಾ ತಾರೆಯರು, ಕ್ರೀಡಾಪಟುಗಳು, ಮಾಜಿ ಸೈನಿಕರು ಸೇರಿದಂತೆ ವಿವಿಧ ಕ್ಷೇತ್ರಗಳ ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. 2016ರಲ್ಲಿ ಪ್ರಧಾನಿ ಮೋದಿ ತೆಗೆದುಕೊಂಡ ನೋಟ್ ಬ್ಯಾನ್ ವಿರುದ್ಧ ಕಟುಟೀಕೆ ಮಾಡಿದ್ದ ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್, ಇದು ಭಾರತದ ಆರ್ಥಿಕತೆ ಬೆಳವಣಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಎಂದಿದ್ದರು. I do what I do ಅನ್ನೋ ಅವರ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!