ಹೊಸಬರಿಗಾಗಿ ಸಚಿವ ಸ್ಥಾನ ಬಿಡಲು ಸಿದ್ಧ: ಕೆ.ಹೆಚ್ ಮುನಿಯಪ್ಪ

177

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇತ್ತೀಚೆಗೆ ನಡೆದ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಕೆ.ಹೆಚ್ ಮುನಿಯಪ್ಪ ಮಾತನಾಡಿ, ಹಿರಿಯರು ಎರಡೂವರೆ ವರ್ಷದ ನಂತರ ಸಚಿವ ಸ್ಥಾನ ಬಿಡಬೇಕು. ಈ ಮೂಲಕ ಹೊಸಬರಿಗೆ ಅವಕಾಶ ಕೊಡಬೇಕು ಎಂದಿದ್ದರು. ಅದು ಸಾಕಷ್ಟು ಚರ್ಚೆಗೆ ಕಾರಣವಾಯ್ತು. ಇಂದು ಇದೆ ವಿಚಾರ ಮತ್ತೆ ಮಾತನಾಡಿದ್ದಾರೆ.

ಯುವಕರಿಗೆ ಅವಕಾಶ ಸಿಗಲಿ ಅನ್ನೋದು ನನ್ನ ಅಭಿಪ್ರಾಯ. ಸಚಿವ ಸ್ಥಾನ ಬಿಟ್ಟುಕೊಟ್ಟರೂ ಸಹ ಶಾಸಕನಾಗಿರುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ಬಗ್ಗೆ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೆ ನೋಡೋಣ ಎಂದಿದ್ದಾರೆ.

ನಾವು ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಿದ್ದೇವೆ. ಯಾವುದೇ ಮಾತಿಗೆ ತಪ್ಪಿಲ್ಲ. ಆಹಾರ ಇಲಾಖೆಗೆ ಯಾವುದೇ ರೀತಿಯಲ್ಲಿ ಅನುದಾನದ ಕೊರತೆ ಇಲ್ಲ. ಬಜೆಟ್ ನಲ್ಲಿ ಸಾವಿರಾರು ಕೋಟಿ ರೂಪಾಯಿ ಮೀಸಲು ಇಡಲಾಗಿದೆ. ಅನ್ನಭಾಗ್ಯ ಯೋಜನೆ ಈಡೇರಿಸಲು ನಾವು ಎಲ್ಲ ರೀತಿಯಿಂದ ಬದ್ಧರಾಗಿದ್ದೇವೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!