ಪ್ರಜಾಸ್ತ್ರ ಸುದ್ದಿ
ಚಿಕ್ಕಬಳ್ಳಾಪುರ: ಪುಷ್ಪ ಸಿನಿಮಾ ಶೈಲಿಯಲ್ಲಿ ರಕ್ತಚಂದನ ಸಾಗಾಟ ಮಾಡುತ್ತಿದ್ದವರ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಉಳಿದಿದ್ದಾರೆ. ಬೆಂಗಳೂರು-ಹೈದರಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರಿನ ಸೀಟ್ ಕೆಳಗೆ ವ್ಯವಸ್ಥೆ ಮಾಡಿ ಅಲ್ಲಿ 24 ರಕ್ತಚಂದನದ ತುಂಡುಗಳನ್ನು ಇಟ್ಟುಕೊಂಡು ಅಕ್ರಮ ಸಾಗಾಟ ಮಾಡಲಾಗುತ್ತಿತ್ತು. ಕಾರು ಅಪಘಾತವಾದ ಭೀಕರ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೀಗಿದ್ದರೂ ಅದರಲ್ಲಿದ್ದವರೆಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಉಳಿದಿದ್ದು ಪವಾಡದಂತೆ ಆಗಿದೆ. ಪೇರಸಂದ್ರ ಪೊಲೀಸರು ರಕ್ತಚಂದನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.