ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶುಕ್ರವಾರ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ಜೋರಾಗುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರ ಶಡ್ಯೂಲ್ 9ಕ್ಕೆ ಸೇರಿಸುವಂತೆ ಆಗ್ರಹಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ನಡೆಸಿದೆ. ಮೀಸಲಾತಿ ಹೆಚ್ಚಳ ಬಗ್ಗೆ ಕಳೆದ 5 ತಿಂಗಳಿಂದ ಶಿಫಾರಸು ಮಾಡಿಲ್ಲ. ಈಗ ಮಾಡಿದೆ. ಮೀಸಲಾತಿ ಹೆಚ್ಚಳ ವಿಚಾರ ಶಡ್ಯೂಲ್ 9ಕ್ಕೆ ಸೇರಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದರು.
ಸರ್ಕಾರದ ವಿರುದ್ಧ ಪ್ರತಿಭಟನೆ ಜೋರಾಗುತ್ತಿದ್ದಂತೆ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟಿನಲ್ಲಿ ಸರ್ಕಾರದ ವಿರುದ್ಧ ಮೀಸಲಾತಿ ಹೆಚ್ಚಳ ಅಸ್ತ್ರವನ್ನು ಕಾಂಗ್ರೆಸ್ ಪ್ರಯೋಗಿಸಿದೆ.